Featured

ದ.ಕ.: ಆ. 24ರ ಶನಿವಾರ ಸೇರಿ ಮುಂದಿನ ಪ್ರತೀ ಶನಿವಾರ ಮಧ್ಯಾಹ್ನದ ಬಳಿಕ ಪೂರ್ತಿ ತರಗತಿ – Vishwanews24

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಪ್ರವಾಹ ಸ್ಥಿತಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರಿಂದ ತರಗತಿ ಕೊರತೆಯನ್ನು ಭರ್ತಿ ಮಾಡುವ ಉದ್ದೇಶದಿಂದ ಇನ್ನು ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಯು ಸಂಬಂಧಿಸಿದ ಶಾಲೆಗಳಿಗೆ ಸೂಚನೆ ನೀಡಿದೆ.

ಈ ವಿಶೇಷ ತರಗತಿಗಳು ಆಗಸ್ಟ್ 24ರಿಂದಲೇ ಪ್ರಾರಂಭಗೊಳ್ಳಲಿದೆ. ಆದರೆ ರವಿವಾರ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಡಿ.ಡಿ.ಪಿ.ಐ. ವೈ. ಶಿವರಾಮಯ್ಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಒಟ್ಟು 13 ಶನಿವಾರ, ಉಳಿದ ಕಡೆಗಳಲ್ಲಿ 12 ಶನಿವಾರ ಮಧ್ಯಾಹ್ನದ ತರಗತಿಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.

ಜಾಹಿರಾತು

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಢಿಲ್ ಅವರು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ ತಿಂಗಳ ಪ್ರಾರಂಭದಲ್ಲಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದರು.
ಈ ಹಿನ್ನಲೆಯಲ್ಲಿ ವಿಶೇಷ ತರಗತಿಗಳು ಆಗಸ್ಟ್ 24ರಿಂದಲೇ ಪ್ರಾರಂಭಗೊಳ್ಳಲಿದೆ. ಜಿಲ್ಲೆಯಲ್ಲಿ ಕೆಲವು ತಾಲೂಕಿನಲ್ಲಿ ಆರು ದಿನ ಹಾಗೂ ಕೆಲವು ತಾಲೂಕಿನಲ್ಲಿ 5 ದಿನ ರಜೆ ನೀಡಲಾಗಿತ್ತು. ಒಂದು ದಿನದ ತರಗತಿ ಸರಿದೂಗಿಸಲು ಎರಡು ಶನಿವಾರ ತರಗತಿ ನಡೆಸಬೇಕಾಗುತ್ತದೆ ಹೀಗಾಗಿ ಮುಂದಿನ 10-12 ಶನಿವಾರ ತರಗತಿ ನಡೆಯಲಿದೆ. ಒಂದು ವೇಳೆ ಶನಿವಾರ ಸರ್ಕಾರಿ ರಜೆ ದಿನವಾದರೆ ತರಗತಿ ನಡೆಸಬೇಕಿಲ್ಲ. ಮತ್ತು ಭಾನುವಾರ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಡಿ.ಡಿ.ಪಿ.ಐ. ವೈ. ಶಿವರಾಮಯ್ಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

12 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago