ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ.
ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್ ಲಸಿಕೆ ಪಡೆದ ಮಂದಿ, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಕೋವಿಶೀಲ್ಡ್ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.
ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…