ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ.
ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್ ಲಸಿಕೆ ಪಡೆದ ಮಂದಿ, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಕೋವಿಶೀಲ್ಡ್ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.
ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…