Featured

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ – Vishwanews24

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ

ಮಂಗಳೂರು:ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ.

ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ (ಇಂದು) ಈದ್ ಉಲ್ ಫಿತರ್ ಆಚರಿಸುವುದು ಎಂದು ಘೋಷಿಸಿದ್ದರು. ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಒಂದು ತಿಂಗಳ ಉಪವಾಸ ತೊರೆದ ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್​ ಯು.ಟಿ. ಖಾದರ್ ಅವರು ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಮಸೀದಿಯಲ್ಲಿ ನಡೆದ ನಮಾಜ್​ನಲ್ಲಿ ಪಾಲ್ಗೊಂಡರು.

ದಕ್ಷಿಣ ಕನ್ನಡ – ಉಡುಪಿಯಲ್ಲಿ ಸರ್ಕಾರಿ ರಜೆ: ರಂಜಾನ್​ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನಿಗದಿತ ಪರೀಕ್ಷೆಗಳು ಬಿಟ್ಟು, ಉಳಿದಂತೆ ಸರಕಾರಿ ಕಚೇರಿಗಳು ಮುಚ್ಚಿರುತ್ತವೆ. ವಿಧಾನ ಸಭೆ ಸ್ಪೀಕರ್​ ಯು.ಟಿ. ಖಾದರ್​ ಅವರ ಮನವಿಯಂತೆ ಸರಕಾರದ ಅಧೀನ ಕಾರ್ಯದರ್ಶಿ ವಿಜಯ ಕುಮಾರ್ ಎಚ್.ಬಿ. ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಪ್ರತಿಯೊಂದು ಹಬ್ಬದ ಸಂದೇಶವೂ ನಮ್ಮನ್ನು ನಾವು ತಿದ್ದಿಕೊಂಡು ಸರಿಯಾದ ದಾರಿಯಲ್ಲಿ ಸಾಗುವುವಾಗಿದೆ. ಈದ್​ ಉಲ್ ಫಿತರ್​, ಯುಗಾದಿ, ಈಸ್ಟರ್ ಹಬ್ಬದ‌ ಸಂದೇಶಗಳು ಕೂಡ ಇದೇ ಆಗಿದೆ. ತ್ಯಾಗದ ಸಂಕೇತವಾಗಿ ಈದುಲ್ ಫಿತರ್ ಹಿನ್ನೆಲೆಯಲ್ಲಿ ಹಸಿವನ್ನು ಮಾತ್ರ ಅನುಭವಿಸದೆ, ತ್ಯಾಗ ಸಹನೆ ಮೊದಲಾದವುಗಳನ್ನು ಬಗೆಹರಿಸುವ ವ್ಯಕ್ತಿತ್ವ ರೂಪಿಸಿಕೊಳ್ಳುವುದಾಗಿದೆ. ಜಿಲ್ಲೆಯಲ್ಲಿ ಎಲ್ಲರೂ ಈದುಲ್ ಫಿತರ್, ಯುಗಾದಿ ಹಾಗೂ ಈಸ್ಟರ್ ಹಬ್ಬದ ಸಂಭ್ರಮದಲ್ಲಿ ಸಂತಸದಲ್ಲಿದ್ದಾರೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago