ಮಂಗಳೂರು/ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೂ ರೂಪಾಂತರಿತ ವೈರಸ್ ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಡಿ.28 ರಿಂದ ಜ.7 ರವರೆಗೆ ಘೋಷಿಸಿರುವ ರಾತ್ರಿ ಕರ್ಫ್ಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಯಲಿರುತ್ತದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ತಿಳಿಸಿದ್ದಾರೆ.
ಕರ್ಫ್ಯೂ ಹಿನ್ನಲೆಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಉಭಯ ಜಿಲ್ಲೆಗಳಲ್ಲಿ ಯಥಾವತ್ತಾಗಿ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದಂತೆ ರಾತ್ರಿ ಕರ್ಪ್ಯೂ ಅವಧಿಯಲ್ಲಿ ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ಅವಕಾಶಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
2020ರ ಮಾರ್ಚ್ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆಗ ಲಾಕ್ಡೌನ್ ಸಡಿಲಿಕೆ ಸಮಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಅಂದಿನಿಂದ 2021ರ ನವೆಂಬರ್ ಮೊದಲ ವಾರದವರೆಗೂ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಆದೇಶ ಜಾರಿಯಲ್ಲಿತ್ತು. ಒಂದೂವರೆ ತಿಂಗಳಲ್ಲೇ ಮತ್ತೆ ರಾತ್ರಿ ಕರ್ಫ್ಯೂ ಆದೇಶ ಜಾರಿಗೆ ಬಂದಂತಾಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…