ದ.ಕ. ಜಿಲ್ಲಾ ಕಾಂಗ್ರೆಸ್ನಿಂದ ಇಂದಿರಾ ಗಾಂಧಿಯ 103ನೇ ಜನ್ಮ ದಿನಾಚರಣೆ
ದಕ್ಷಿಣ ಕನ್ನಡ: ಖಲಿಸ್ತಾನ ಪ್ರತ್ಯೇಕವಾದಿಗಳ ವಿರುದ್ಧ ಕೈಗೊಂಡ ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆಯೇ ಇಂದಿರಾ ಗಾಂಧಿ ಅವರ ಪ್ರಾಣಕ್ಕೂ ಕುತ್ತಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆಯನ್ನ ಉದ್ದೇಶಿಸಿ ಅವರು ಈ ಮೇಲಿನ ಮಾತನ್ನು ಆಡಿದ್ದಾರೆ. ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ ಇಂದಿರಾ ಗಾಂಧಿ ಅವರ ಯೋಜನೆಗಳನ್ನ ಗ್ರಾಮ ಗ್ರಾಮಕ್ಕೆ ತಲುಪಿಸುವ ಕೆಲಸ ಕಾಂಗ್ರೆಸ್ದ.ಕ. ಜಿಲ್ಲಾ ಕಾಂಗ್ರೆಸ್ನಿಂದ ಇಂದಿರಾ ಗಾಂಧಿಯ 103ನೇ ಜನ್ಮ ದಿನಾಚರಣೆಆಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಿಥುನ್ ರೈ, ಶಶಿಧರ ಹೆಗ್ಡೆ, ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು.
