Featured

ದ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜು- vishwanews24

ದ.ಕ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಕಂಟ್ರೋಲ್‌ ರೂಂ ಕಾರ್ಯಾರಂಭ

ಮಂಗಳೂರು: ಜಿಲ್ಲಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಜೂನ್ 26ರವರೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ‌ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಾಕೃತಿಕ ವಿಕೋಪ ನಿಭಾಯಿಸಲು ಪ್ರತಿ ತಾಲೂಕು ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಆರಂಭಿಸಿದೆ.

ಅಗತ್ಯವಿದ್ದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಕಾಳಜಿ ಕೇಂದ್ರ ಸ್ಥಾಪಿಸುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾಡಳಿತವು ನೇಮಿಸಿರುವ ಇನ್ಸಿಡೆಂಟ್ ಕಮಾಂಡರ್‌ಗಳು ಸದಾ ಸನ್ನದ್ಧವಾಗಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನವನ್ನು ತೊರೆಯುವಂತಿಲ್ಲ ಎಂದು ಪ್ರಾಧಿಕಾರ ಸೂಚಿಸಿದೆ.

ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಬಾರದು. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿರುವ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು. ಪ್ರವಾಸಿಗರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ತಗ್ಗು ಪ್ರದೇಶ, ಕೆರೆ, ನದಿ ಅಥವಾ ಸಮುದ್ರಕ್ಕೆ ಮಕ್ಕಳು ತೆರಳದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಪ್ರಾಧಿಕಾರ ಸಲಹೆ ನೀಡಿದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago