ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶಿಸಿರುತ್ತಾರೆ.

ಸರಕಾರದ ಜುಲೈ 30 ರ ಆದೇಶ ತೆರವು-3 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ಕೆಳಕಂಡ ನಿರ್ದೇಶನಗಳನ್ನು ಸಾರ್ವಜನಿಕರು ತಪ್ಪದೆ ಪಾಲಿಸಬೇಕು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯ ದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿರುತ್ತದೆ. ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ರೂ. 200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ. 100 ದಂಡ ವಿಧಿಸಲಾಗುವುದು.

ಹೆಚ್ಚುತ್ತಿರುವ ಸಾಂಕ್ರಾಮಿಕದ ಮಧ್ಯೆ ಮಾಸ್ಕ್‌ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯತೆಯ ಬಗ್ಗೆ ಮಂಗಳೂರು ನಗರದ 60 ವಾರ್ಡ್‌ಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲು ಅಧಿಕಾರಿಗಳನ್ನು ನಿಯೋಜಿಸುವಂತೆ ಅವರು ನಿಗಮ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಹಾಗೆಯೇ ಈ ಆದೇಶಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಯೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು.

ಬೃಹತ್ ಸಾರ್ವಜನಿಕ ಸಭೆಗಳು ಮತ್ತು ಒಟ್ಟು ಗೂಡುವಿಕೆ ನಿಷೇಧವನ್ನು ಮುಂದುವರೆಸಲಾಗಿದೆ. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಮೀರಿರಬಾರದು. ಶವ ಸಂಸ್ಕಾರ/ಅಂತಿಮ ವಿಧಿ ಸಂಬಂಧಿತ ಕಾರ್ಯಗಳಿಗೆ ವ್ಯಕ್ತಿಗಳ ಸಂಖ್ಯೆ 20 ಮೀರಿರಬಾರದು.

ಸ್ಥಳೀಯ ಪ್ರಾಧಿಕಾರಗಳು, ಅದರ ಕಾನೂನು, ನಿಯಮ ಮತ್ತು ನಿಬಂಧನೆಗಳಲ್ಲಿ ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನಾರ್ಹ ಶಿಕ್ಷೆಯಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

8 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

14 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

15 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago