ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶಿಸಿರುತ್ತಾರೆ.
ಸರಕಾರದ ಜುಲೈ 30 ರ ಆದೇಶ ತೆರವು-3 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ಕೆಳಕಂಡ ನಿರ್ದೇಶನಗಳನ್ನು ಸಾರ್ವಜನಿಕರು ತಪ್ಪದೆ ಪಾಲಿಸಬೇಕು.
ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯ ದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿರುತ್ತದೆ. ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ರೂ. 200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ. 100 ದಂಡ ವಿಧಿಸಲಾಗುವುದು.
ಹೆಚ್ಚುತ್ತಿರುವ ಸಾಂಕ್ರಾಮಿಕದ ಮಧ್ಯೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯತೆಯ ಬಗ್ಗೆ ಮಂಗಳೂರು ನಗರದ 60 ವಾರ್ಡ್ಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲು ಅಧಿಕಾರಿಗಳನ್ನು ನಿಯೋಜಿಸುವಂತೆ ಅವರು ನಿಗಮ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಹಾಗೆಯೇ ಈ ಆದೇಶಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಯೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು.
ಬೃಹತ್ ಸಾರ್ವಜನಿಕ ಸಭೆಗಳು ಮತ್ತು ಒಟ್ಟು ಗೂಡುವಿಕೆ ನಿಷೇಧವನ್ನು ಮುಂದುವರೆಸಲಾಗಿದೆ. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಮೀರಿರಬಾರದು. ಶವ ಸಂಸ್ಕಾರ/ಅಂತಿಮ ವಿಧಿ ಸಂಬಂಧಿತ ಕಾರ್ಯಗಳಿಗೆ ವ್ಯಕ್ತಿಗಳ ಸಂಖ್ಯೆ 20 ಮೀರಿರಬಾರದು.
ಸ್ಥಳೀಯ ಪ್ರಾಧಿಕಾರಗಳು, ಅದರ ಕಾನೂನು, ನಿಯಮ ಮತ್ತು ನಿಬಂಧನೆಗಳಲ್ಲಿ ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನಾರ್ಹ ಶಿಕ್ಷೆಯಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…