ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.
ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.
ಪುಣೆ ರಸ್ತೆ ಅಪಘಾತ : ಸ್ಕೂಟರ್ಗೆ ಟ್ರಕ್ ಢಿಕ್ಕಿ.. ಮಂಗಳೂರು ಮೂಲದ ದಂತ ವೈದ್ಯೆ ಸಾವು – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…