ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.
ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.
ಪುಣೆ ರಸ್ತೆ ಅಪಘಾತ : ಸ್ಕೂಟರ್ಗೆ ಟ್ರಕ್ ಢಿಕ್ಕಿ.. ಮಂಗಳೂರು ಮೂಲದ ದಂತ ವೈದ್ಯೆ ಸಾವು – Vishwanews24
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…