Featured

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ  – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ  – Vishwanews24

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ ..

ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ ..

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್‌ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್‌, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್‌3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಪುಣೆ ರಸ್ತೆ ಅಪಘಾತ : ಸ್ಕೂಟರ್‌ಗೆ ಟ್ರಕ್ ಢಿಕ್ಕಿ.. ಮಂಗಳೂರು ಮೂಲದ ದಂತ ವೈದ್ಯೆ ಸಾವು – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago