ಕಡಬ : ದ.ಕ. ಜಿಲ್ಲೆಯ ಕಡಬ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಪ್ರವಾಹದ ನೀರಿಗೆ ಬಿದ್ದ ಯುವಕ ಶರೀಫ್ ನನ್ನು ಜೀವದ ಹಂಗು ತೊರೆದು ಸೋಮಶೇಖರ್ ಎಂಬವರು ರಕ್ಷಿಸಿ ಮಾನವೀಯತೆ ಮೆರೆಯುವ ಜೊತೆಗೆ ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.
ಆಕಸ್ಮಿಕವಾಗಿ ನದಿಗೆ ಬಿದ್ದ ಕ್ರೇನ್ ಆಪರೇಟರ್ ಆಗಿರುವ ಮುಸ್ಲಿಂ ಯುವಕನನ್ನು ಹಿಂದೂ ಯುವಕನೊಬ್ಬ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರದಲ್ಲಿ ನಡೆದಿದೆ. ಜೆಸಿಬಿ ಆಪರೇಟರ್ನನ್ನು ಷರೀಫ್ ಎಂದು ಗುರುತಿಸಲಾಗಿದ್ದು, ಇವರನ್ನು ಸೋಮಶೇಖರ್ ಕಟ್ಟೆಮನೆ ರಕ್ಷಿಸಿದ್ದಾರೆ.
ಜೆಸಿಬಿಯಿಂದ ಮೇಲಕ್ಕೆತ್ತಲಾದ ಮರದ ದಿಮ್ಮಿಗಳನ್ನು ಸಾಗಿಸುವ ಸಂದರ್ಭ ಆಕಸ್ಮಾತ್ತಾಗಿ ಮರದ ದಿಮ್ಮಿಯೊಂದು ಷರೀಫ್ ಗೆ ತಾಗಿದ್ದು, ಅವರು ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾರೆ. ಹೀಗೆ ನದಿಗೆ ಬಿದ್ದ ಷರೀಫ್ ನೀರಿನ ರಭಸಕ್ಕೆ ಈಜಲು ಸಾಧ್ಯವಾಗದೆ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿ ಸೋಮಶೇಖರ್ ತಕ್ಷಣ ನದಿಗೆ ಹಾರಿ ಷರೀಫ್ ಅವರನ್ನು ಸುಮಾರು 5 ನಿಮಿಷಗಳ ಕಾಲ ಹಿಡಿದುಕೊಂಡು ನೀರಿನಲ್ಲಿ ನಿಂತರು. ನಂತರ ಹಗ್ಗ ಬಳಸಿ ಜೆಸಿಬಿ ಮುಖಾಂತರ ಅವರನ್ನು ಮೇಲಕ್ಕೆತ್ತಲಾಯಿತು.
ಸದ್ಯ ಸೋಮಶೇಖರ್ ಕ್ಟೆಮನೆ ಅವರ ಕಾರ್ಯಕ್ಕೆ ಜಿಲ್ಲೆಯಾದ್ಯಾಂತ ಭಾರೀ ಪ್ರಶಶಮಸೆ ವ್ಯಕ್ತವಾಗುತ್ತಿದೆ. ಸದ್ಯ ಶರೀಫ್ ನನ್ನು ರಕ್ಷಣೆ ಮಾಡುತ್ತೊರುವ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಸೋಮಶೇಖರ್ ಅವರ ಧೈರ್ಯ ಹಾಗೂ ಸಾಹಸವನ್ನು ಜನ ಕೊಂಡಾಡುತ್ತಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…