ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡು ಬಂದಿದೆ.ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ.
ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…