ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡು ಬಂದಿದೆ.ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ.
ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…