ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ – vishwanews24

Featured, ದಕ್ಷಿಣ ಕನ್ನಡ

ದ.ಕ. ಬಿಜೆಪಿ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ.

ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು ಪ್ರಸ್ತುತ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯೂ ಆಗಿದ್ದು ಸಂಘನಿಕೇತನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಹಾಗೂ ಹಲವು ಸಂಘಟನೆಗಳಲ್ಲಿ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿರುತ್ತಾರೆ.

ಇವರನ್ನು ಈ ಮುಂದಿನ ಅವಧಿಗೆ ದ.ಕ. ಬಿಜೆಪಿಯ ಜಿಲ್ಲಾ ವಕ್ತಾರರಾಗಿ ದ.ಕ. ಜಿಲ್ಲಾ ಬಿಜೆಪಿಯ ಅದ್ಯಕ್ಷರಾರ ಸತೀಶ್ ಕುಂಪಲ ಆಯ್ಕೆ ಮಾಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ – vishwanews24

Leave a Reply