ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲು ಸೇವೆಯಲ್ಲಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದು ಕೋರಿ ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.
‘ಕೊಂಕಣ ರೈಲ್ವೆ ನಿಗಮವನ್ನು (ಕೆಆರ್ಸಿಎಲ್) ಭಾರತೀಯ ರೈಲ್ವೆಯ ಜೊತೆ ವಿಲೀನ ಮಾಡಬೇಕು ಎಂಬುದು ಕೊಂಕಣ ತೀರದ ಪ್ರಯಾಣಿಕರ ಬಹುಕಾಲದ ಬೇಡಿಕೆ.
ಸ್ವತಂತ್ರ ಸಂಸ್ಥೆಯಾಗಿರುವ ಕೆಆರ್ಸಿಎಲ್ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ. ಮುಖ್ಯ ರೈಲ್ವೆ ಮೂಲಸೌಕರ್ಯಗಳಿಗೆ ಇತರ ವಲಯಗಳನ್ನು ಅವಲಂಬಿಸಬೇಕಾಗಿದೆ. ಈ ಸಮಸ್ಯೆ ನಿವಾರಿಸಲು ಈ ವಿಲೀನ ಅವಶ್ಯ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಮಂಗಳೂರು-ಬೆಂಗಳೂರು ರೈಲು ಮಾರ್ಗವನ್ನು ಮೇಲ್ದರ್ಜೆಗೇರಿಸುವ ಅನಿವಾರ್ಯ ಇದೆ. ಈ ಮಾರ್ಗದಲ್ಲಿ ಶಿರಾಡಿ ಘಾಟಿ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಬೇಕಾಗಿದೆ. ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಸಾಗಣೆ ವೃದ್ಧಿಗೆ ಮತ್ತು ಪ್ರಯಾಣಿಕರ ರೈಲು ಸೇವೆ ಹೆಚ್ಚಳಕ್ಕೆ ಈ ಅಧ್ಯಯನ ಅತ್ಯಗತ್ಯ. ಸುಬ್ರಹ್ಮಣ್ಯ-ಸಕಲೇಶಪುರದ ಘಾಟಿ ಪ್ರದೇಶದ ಸಾಮರ್ಥ್ಯ ವೃದ್ಧಿಗಾಗಿ ರೈಲು ನಿಲುಗಡೆಗೆ ಪರ್ಯಾಯ ಹಳಿ (ಸೈಡಿಂಗ್) ನಿರ್ಮಿಸಲು ಕ್ರಮವಹಿಸಬೇಕಿದೆ’ ಎಂದು ಅವರು ವಿವರಿಸಿದ್ದಾರೆ.
‘ಅನುಷ್ಠಾನಗೊಳ್ಳುತ್ತಿರುವ ರೈಲು ಮೂಲಸೌಕರ್ಯ ವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ಹಾಗೂ ರೈಲ್ವೆ ಇಲಾಖೆಗೆ ಸಂಬಂಧಿಸಿ ಈ ಪ್ರದೇಶದ ಇನ್ನಿತರ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚಿಸಲು ಮಂಗಳೂರಿನಲ್ಲಿ ಸಭೆ ನಡೆಸಲು ಉದ್ದೇಶಿಸಿದ್ದೇವೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ದಕ್ಷಿಣ ರೈಲ್ವೆ, ನೈರುತ್ಯ ರೈಲ್ವೆ, ಕೊಂಕಣ ರೈಲ್ವೆ, ಮಂಗಳೂರು ನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನ ನಡೆಸಲು ನಿರ್ಧರಿಸಿದ್ದೇವೆ. ಈ ಸಭೆಯಲ್ಲಿ ಸಚಿವರಾದ ತಾವೂ ಭಾಗವಹಿಸಬೇಕು’ ಎಂದು ಅವರು ಕೋರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…