ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲು ಸೇವೆಯಲ್ಲಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದು ಕೋರಿ ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.
‘ಕೊಂಕಣ ರೈಲ್ವೆ ನಿಗಮವನ್ನು (ಕೆಆರ್ಸಿಎಲ್) ಭಾರತೀಯ ರೈಲ್ವೆಯ ಜೊತೆ ವಿಲೀನ ಮಾಡಬೇಕು ಎಂಬುದು ಕೊಂಕಣ ತೀರದ ಪ್ರಯಾಣಿಕರ ಬಹುಕಾಲದ ಬೇಡಿಕೆ.
ಸ್ವತಂತ್ರ ಸಂಸ್ಥೆಯಾಗಿರುವ ಕೆಆರ್ಸಿಎಲ್ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ. ಮುಖ್ಯ ರೈಲ್ವೆ ಮೂಲಸೌಕರ್ಯಗಳಿಗೆ ಇತರ ವಲಯಗಳನ್ನು ಅವಲಂಬಿಸಬೇಕಾಗಿದೆ. ಈ ಸಮಸ್ಯೆ ನಿವಾರಿಸಲು ಈ ವಿಲೀನ ಅವಶ್ಯ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಮಂಗಳೂರು-ಬೆಂಗಳೂರು ರೈಲು ಮಾರ್ಗವನ್ನು ಮೇಲ್ದರ್ಜೆಗೇರಿಸುವ ಅನಿವಾರ್ಯ ಇದೆ. ಈ ಮಾರ್ಗದಲ್ಲಿ ಶಿರಾಡಿ ಘಾಟಿ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಬೇಕಾಗಿದೆ. ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಸಾಗಣೆ ವೃದ್ಧಿಗೆ ಮತ್ತು ಪ್ರಯಾಣಿಕರ ರೈಲು ಸೇವೆ ಹೆಚ್ಚಳಕ್ಕೆ ಈ ಅಧ್ಯಯನ ಅತ್ಯಗತ್ಯ. ಸುಬ್ರಹ್ಮಣ್ಯ-ಸಕಲೇಶಪುರದ ಘಾಟಿ ಪ್ರದೇಶದ ಸಾಮರ್ಥ್ಯ ವೃದ್ಧಿಗಾಗಿ ರೈಲು ನಿಲುಗಡೆಗೆ ಪರ್ಯಾಯ ಹಳಿ (ಸೈಡಿಂಗ್) ನಿರ್ಮಿಸಲು ಕ್ರಮವಹಿಸಬೇಕಿದೆ’ ಎಂದು ಅವರು ವಿವರಿಸಿದ್ದಾರೆ.
‘ಅನುಷ್ಠಾನಗೊಳ್ಳುತ್ತಿರುವ ರೈಲು ಮೂಲಸೌಕರ್ಯ ವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ಹಾಗೂ ರೈಲ್ವೆ ಇಲಾಖೆಗೆ ಸಂಬಂಧಿಸಿ ಈ ಪ್ರದೇಶದ ಇನ್ನಿತರ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚಿಸಲು ಮಂಗಳೂರಿನಲ್ಲಿ ಸಭೆ ನಡೆಸಲು ಉದ್ದೇಶಿಸಿದ್ದೇವೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ದಕ್ಷಿಣ ರೈಲ್ವೆ, ನೈರುತ್ಯ ರೈಲ್ವೆ, ಕೊಂಕಣ ರೈಲ್ವೆ, ಮಂಗಳೂರು ನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನ ನಡೆಸಲು ನಿರ್ಧರಿಸಿದ್ದೇವೆ. ಈ ಸಭೆಯಲ್ಲಿ ಸಚಿವರಾದ ತಾವೂ ಭಾಗವಹಿಸಬೇಕು’ ಎಂದು ಅವರು ಕೋರಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…