ಮಂಗಳೂರು : ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ ಎಂದರು.
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಗೆಲ್ಲುತ್ತಿದೆ. ಆದರೆ ಈ ಬಾರಿ ಆ ರೀತಿ ನಡೆಯಲ್ಲ. ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ. ದಕ್ಷಿಣಕನ್ನಡದಲ್ಲೂ ಇದೇ ಪರಿಸ್ಥಿತಿ ಆಗಲಿದೆಯ ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ.
ಆದರೆ ಪ್ರತಿಬಾರಿಯೂ ಈ ತಂತ್ರ ನಡೆಯಲ್ಲ ಎಂದರು. ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಘೋಷಣೆ ಈ ಸಮಾವೇಶದಲ್ಲಿ ನಡೆಯುವುದಿಲ್ಲ, ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸರ್ವೇ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ನನಗೆ ಎಲ್ಲಾ ಅವಕಾಶ ನೀಡಿದೆ ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…