ಮಂಗಳೂರು,: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ತನ್ನ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಕಣಕ್ಕಿಳಿಸಿದ್ದು ಕಾರ್ಯಕರ್ತ ಪಡೆಯೊಂದಿಗೆ ಇನ್ನೂ ಹೆಚ್ಚಿನ ಉತ್ಸಾಹದಿಂದ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಇತ್ತ ಕಡೆ ನಳಿನ್ ಕುಮಾರ್ ವಿರುದ್ದ ಸ್ವರ್ಧಿಸಲು ಕಾಂಗ್ರೆಸ್ ಕೂಡಾ ರಣತಂತ್ರ ರೂಪಿಸಿದ್ದು ತನ್ನ ಅಭ್ಯರ್ಥಿಯಾಗಿ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿಯಾಗಿದೆ.
ಪಕ್ಷದ ಯುವ ನಾಯಕ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ನಳಿನ್ ಎದುರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಮಾಜಿ ಸಚಿವ ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಬಿ. ರಮನಾಥ ರೈ ಅವರು ಮಿಥುನ್ ರೈ ಗೆ ಪ್ರಬಲ ಪೈಪೋಟಿ ನೀಡಿ ಕೊನೆಯ ವರೆಗೂ ಟಿಕೆಟಿಗಾಗಿ ದೆಹಲಿಯ ವರೆಗೂ ಲಾಭಿ ನಡೆಸಿದ್ದರು. ಆದರೆ ಬಿಜೆಪಿ ಹಾಲಿ ಸಂಸದ ನಳಿನ್ ಎದುರು ಸ್ಪರ್ಧಿಸಲು ಗಟ್ಟಿ ಗುಂಡಿಗೆಯ ಯುವ ನಾಯಕನ ಮನಗಂಡ ಕಾಂಗ್ರೆಸ್ ಹೈ ಕಮಾಂಡ್ ಮಿಥುನ್ ರೈ ಗೆ ಟಿಕೆಟ್ ನೀಡಿ ಕಣಕ್ಕಿಳಿಸಲು ಸಿದ್ದತೆ ನಡೆಸಿದೆ
ಒಟ್ಟಾರೆ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಇಬ್ಬರು ಬಿಸಿ ರಕ್ತದ ಯುವ ಅಭ್ಯರ್ಥಿಗಳ ಜಿದ್ದಾ ಜಿದ್ದಿನ ಕ್ಷೇತ್ರವಾಗಲಿರುವುದು ಮಾತ್ರ ಸತ್ಯ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…