ಮಂಗಳೂರು,: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ತನ್ನ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಕಣಕ್ಕಿಳಿಸಿದ್ದು ಕಾರ್ಯಕರ್ತ ಪಡೆಯೊಂದಿಗೆ ಇನ್ನೂ ಹೆಚ್ಚಿನ ಉತ್ಸಾಹದಿಂದ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಇತ್ತ ಕಡೆ ನಳಿನ್ ಕುಮಾರ್ ವಿರುದ್ದ ಸ್ವರ್ಧಿಸಲು ಕಾಂಗ್ರೆಸ್ ಕೂಡಾ ರಣತಂತ್ರ ರೂಪಿಸಿದ್ದು ತನ್ನ ಅಭ್ಯರ್ಥಿಯಾಗಿ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿಯಾಗಿದೆ.
ಪಕ್ಷದ ಯುವ ನಾಯಕ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ನಳಿನ್ ಎದುರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಮಾಜಿ ಸಚಿವ ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಬಿ. ರಮನಾಥ ರೈ ಅವರು ಮಿಥುನ್ ರೈ ಗೆ ಪ್ರಬಲ ಪೈಪೋಟಿ ನೀಡಿ ಕೊನೆಯ ವರೆಗೂ ಟಿಕೆಟಿಗಾಗಿ ದೆಹಲಿಯ ವರೆಗೂ ಲಾಭಿ ನಡೆಸಿದ್ದರು. ಆದರೆ ಬಿಜೆಪಿ ಹಾಲಿ ಸಂಸದ ನಳಿನ್ ಎದುರು ಸ್ಪರ್ಧಿಸಲು ಗಟ್ಟಿ ಗುಂಡಿಗೆಯ ಯುವ ನಾಯಕನ ಮನಗಂಡ ಕಾಂಗ್ರೆಸ್ ಹೈ ಕಮಾಂಡ್ ಮಿಥುನ್ ರೈ ಗೆ ಟಿಕೆಟ್ ನೀಡಿ ಕಣಕ್ಕಿಳಿಸಲು ಸಿದ್ದತೆ ನಡೆಸಿದೆ
ಒಟ್ಟಾರೆ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಇಬ್ಬರು ಬಿಸಿ ರಕ್ತದ ಯುವ ಅಭ್ಯರ್ಥಿಗಳ ಜಿದ್ದಾ ಜಿದ್ದಿನ ಕ್ಷೇತ್ರವಾಗಲಿರುವುದು ಮಾತ್ರ ಸತ್ಯ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…