Featured

ದ.ಕ. ಲೋಕಸಭಾ ಚುನಾವಣೆ: ಸೌಜನ್ಯಾ ಹೋರಾಟ ಸಮಿತಿಯಿಂದ ನೋಟ ಅಭಿಯಾನ – Vishwanews24

ದ.ಕ. ಲೋಕಸಭಾ ಚುನಾವಣೆ: ಸೌಜನ್ಯಾ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗನೀಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.

ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿ ರುವುದಾಗಿ ಪ್ರಸನ್ನ ರವಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago