ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಶಾಲೆ ಪುನರಾರಂಭಿಸಿಲು ದಕ್ಷಿಣಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾಗೂ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆ ಆರಂಭಿಸಲು ಅನುಮತಿ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 17ರಂದು 8, 9 ಮತ್ತು 10 ನೇ ತರಗತಿಗಳನ್ನು ಆರಂಭಿಸಲು ಅನುಮತಿಸಲಾಗಿದೆ. ಅಲ್ಲದೆ, ಸೆಪ್ಟೆಂಬರ್ 20 ರಂದು 6 ಮತ್ತು 7ನೇ ತರಗತಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಎಲ್ಲಾ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಇನ್ನು ಶಾಲೆ ಆರಂಭಗೊಂಡ ಬಳಿಕ ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ ಎಂದು ಕೂಡ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಶೇ.99 ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಅಂತವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…