ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ.
ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ , ಕೊಲ್ಲೂರು ಹಾಗೂ ಮಂದಾರ್ತಿ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಬರಲಿದೆ. ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯ ನಾರಾಯಣ ಭಟ್ ಕಶೆಕೋಡಿ ಹೇಳಿಕೆ ನೀಡಿದ್ದಾರೆ.
ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಸ್ತ್ರಸಂಹಿತೆ ಪಾಲಿಸಲಾಗುತ್ತದೆ. ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದೇಗುಲಕ್ಕೆ ಬರುವಾಗ ಸಾಂಪ್ರದಾಯಕ ಉಡುಗೆ ಧರಿಸಿ ಬರುವಂತೆ ತಿಳಿಸಲಾಗಿದೆ.
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…