ಮಂಗಳೂರು : ಕೊರೊನಾ ವೈರಸ್ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.
ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್೨೯ರಿಂದ ರವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…