ಮಂಗಳೂರು : ಕೊರೊನಾ ವೈರಸ್ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.
ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್೨೯ರಿಂದ ರವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…