ಬೆಂಗಳೂರು : ದಿವಂಗತ ಧರ್ಮಸಿಂಗ್ ಅವರು 2004 ರಲ್ಲಿ ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ನಾನು ಮಾಡಿದ ತಪ್ಪೇ ಕಾರಣ. ಆದರೆ, ಅಂದಿನ ರಾಜಕೀಯ ದಲ್ಲಿ ಅನಿವಾರ್ಯವಾಗಿ ನಡೆದ ಘಟನೆ ಅದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದ್ದಾರೆ.
ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ‘ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘2004 ರ ಧರ್ಮಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ಉಪ ಮುಖ್ಯಮಂತ್ರಿ ಯಾಗಿದ್ದರು. ಆ ಸರ್ಕಾರದಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೆ. ಅಂದಿನ ಸರ್ಕಾರ ಅವಧಿಗೂ ಮೊದಲೇ ಪತನಗೊಳ್ಳಲು, ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಧರ್ಮಸಿಂಗ್ ಸ್ಥಾನ ಕಳೆದುಕೊಳ್ಳಲು ಎಲ್ಲೋ ಒಂದು ಕಡೆ ನನ್ನಿಂದಲೇ ತಪ್ಪಾಯಿತೇನೋ ಎಂಬ ಭಾವನೆ ನನಗಿದೆ ’ ಎಂದರು.
‘ನಾನು ಸಿಎಂ ಆದ ಬಳಿಕ ಅವರ ಆಶೀರ್ವಾದ ಪಡೆಯಲು ಅವರ ಮನೆಗೆ ಹೋದೆ. ಆ ಸಂದರ್ಭದಲ್ಲಿ ಎಲ್ಲಿಯೂ ಅವರ ಮುಖದಲ್ಲಿ ಇವನಿಂದ ನನ್ನ ಅಧಿಕಾರ ಹೋಯಿತು ಎಂಬ ಭಾವನೆ ಕಾಣಲಿಲ್ಲ. ಅಲ್ಲದೆ, ನಾನು ಆಗಿನ ಅನಿವಾರ್ಯ ತೀರ್ಮಾನವನ್ನು ವಿವರಿಸಿ ಧರ್ಮಸಿಂಗ್ ಕ್ಷಮೆ ಕೇಳಿದೆ. ಅದಕ್ಕೆ ಅವರು, ಸ್ವಲ್ಪವೂ ಬೇಸರಗೊಳ್ಳದೆ ರಾಜಕಾರಣದಲ್ಲಿ ಇದೆಲ್ಲವೂ ಸಹಜ. ಇದೆಲ್ಲವನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡ, ಒಳ್ಳೆಯ ಕೆಲಸ ಮಾಡು ಎಂದು ಹರಸಿದರು. ಅವರ ಹೃದಯ ವೈಶಾಲ್ಯತೆಯ ಕ್ಷಣವನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಸ್ಮರಿಸಿದರು
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]