ಬೆಂಗಳೂರು : ದಿವಂಗತ ಧರ್ಮಸಿಂಗ್ ಅವರು 2004 ರಲ್ಲಿ ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ನಾನು ಮಾಡಿದ ತಪ್ಪೇ ಕಾರಣ. ಆದರೆ, ಅಂದಿನ ರಾಜಕೀಯ ದಲ್ಲಿ ಅನಿವಾರ್ಯವಾಗಿ ನಡೆದ ಘಟನೆ ಅದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದ್ದಾರೆ.
ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ‘ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘2004 ರ ಧರ್ಮಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ಉಪ ಮುಖ್ಯಮಂತ್ರಿ ಯಾಗಿದ್ದರು. ಆ ಸರ್ಕಾರದಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೆ. ಅಂದಿನ ಸರ್ಕಾರ ಅವಧಿಗೂ ಮೊದಲೇ ಪತನಗೊಳ್ಳಲು, ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಧರ್ಮಸಿಂಗ್ ಸ್ಥಾನ ಕಳೆದುಕೊಳ್ಳಲು ಎಲ್ಲೋ ಒಂದು ಕಡೆ ನನ್ನಿಂದಲೇ ತಪ್ಪಾಯಿತೇನೋ ಎಂಬ ಭಾವನೆ ನನಗಿದೆ ’ ಎಂದರು.
‘ನಾನು ಸಿಎಂ ಆದ ಬಳಿಕ ಅವರ ಆಶೀರ್ವಾದ ಪಡೆಯಲು ಅವರ ಮನೆಗೆ ಹೋದೆ. ಆ ಸಂದರ್ಭದಲ್ಲಿ ಎಲ್ಲಿಯೂ ಅವರ ಮುಖದಲ್ಲಿ ಇವನಿಂದ ನನ್ನ ಅಧಿಕಾರ ಹೋಯಿತು ಎಂಬ ಭಾವನೆ ಕಾಣಲಿಲ್ಲ. ಅಲ್ಲದೆ, ನಾನು ಆಗಿನ ಅನಿವಾರ್ಯ ತೀರ್ಮಾನವನ್ನು ವಿವರಿಸಿ ಧರ್ಮಸಿಂಗ್ ಕ್ಷಮೆ ಕೇಳಿದೆ. ಅದಕ್ಕೆ ಅವರು, ಸ್ವಲ್ಪವೂ ಬೇಸರಗೊಳ್ಳದೆ ರಾಜಕಾರಣದಲ್ಲಿ ಇದೆಲ್ಲವೂ ಸಹಜ. ಇದೆಲ್ಲವನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡ, ಒಳ್ಳೆಯ ಕೆಲಸ ಮಾಡು ಎಂದು ಹರಸಿದರು. ಅವರ ಹೃದಯ ವೈಶಾಲ್ಯತೆಯ ಕ್ಷಣವನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಸ್ಮರಿಸಿದರು
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…