ಧರ್ಮದ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವ ಷಡ್ಯಂತ್ರವನ್ನು ಕಾಂಗ್ರೆಸ್​​ ಮಾಡುತ್ತಿವೆ : ಪ್ರಹ್ಲಾದ್​​ ಜೋಶಿ -Vishwanews24

ಧಾರವಾಡ: ಧರ್ಮದ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವ ಷಡ್ಯಂತ್ರವನ್ನು ಕಾಂಗ್ರೆಸ್​​ ನೇತೃತ್ವದ ವಿರೋಧ ಪಕ್ಷಗಳು ಮಾಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿಕಾರಿದ್ದಾರೆ.

ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಅಭಿಯಾನದಲ್ಲಿ ಮಾತಾಡಿದ ಪ್ರಹ್ಲಾದ ಜೋಶಿ‌ ಹೀಗೆ ಕಾಂಗ್ರೆಸ್​​ ಮತ್ತಿತರ ಮಿತ್ರ ಪಕ್ಷಗಳ ವಿರುದ್ಧ ಆರೋಪ ಎಸಗಿದ್ದಾರೆ.

ಇತ್ತೀಚೆಗೆ ದೇಶದ ಪೌರತ್ವ ಕಾನೂನು ತಿದ್ದುಪಡಿ ಮಾಡಿದ್ದೇವೆ. ಈ ಕಾನೂನು ಪೌರತ್ವ ಕಿತ್ತುಕೊಳ್ಳುವುದು ಅಲ್ಲ. ಬದಲಿಗೆ ಪೌರತ್ವ ಕೊಡುವಂತಹ ಕಾನೂನು ಇದಾಗಿದೆ. ಆದರೂ ಕಾಂಗ್ರೆಸ್ ಜನರನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಮೂರು ಕೋಟಿ ಮನೆಗಳನ್ನು ಭೇಟಿಯಾಗಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲಿದ್ದೇವೆ ಎಂದರು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ.

ಕೊಪ್ಪಳದಲ್ಲಿರುವ ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ಕೊಡುವ ಬಗ್ಗೆ ಸಂಗಣ್ಣ ಕರಡಿ ಪತ್ರ ವಿಚಾರಕ್ಕೂ ಪ್ರಹ್ಲಾದ್​​ ಜೋಶಿ ಪ್ರತಿಕ್ರಿಯಿಸಿದರು. ಅವರಿಗೆ ಪೌರತ್ವ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಅತ್ಯಾಚಾರಕ್ಕೊಳಗಾಗಿ ದೇಶಕ್ಕೆ ಬಂದವರಿಗೆ ಪೌರತ್ವ ಸಿಗುತ್ತದೆ. ಮಹಾತ್ಮ ಗಾಂಧಿಯೇ ಪಾಕಿಸ್ತಾನದಲ್ಲಿರುವ ಜನರಿಗೆ ತೊಂದರೆಯಾದರೆ ಭಾರತವೇ ಅದರ ಜವಾಬ್ದಾರಿ ಹೊರಬೇಕು ಎಂದರು. ಆದರೀಗ, ಗಾಂಧಿ ಮಾತನ್ನು ಲೆಕ್ಕಿಸದೇ ಕಾಂಗ್ರೆಸ್ ಪೌರತ್ವದ ವಿಷಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಕುಟುಕಿದರು.

ಪೌರತ್ವ ತಿದ್ದುಪಡಿ ಮಸೂದೆಯು ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ವಲಸೆ ಬಂದಿರುವ ಮುಸ್ಲಿಮೇತರ ವ್ಯಕ್ತಿಗಳಿಗೆ ಭಾರತೀಯ ಪೌರತ್ವ ನೀಡಲು ಅನುವು ಮಾಡಿಕೊಡುವ ಕಾನೂನಾಗಿದೆ. ಅಂದರೆ, ವಿದೇಶಗಳಿಂದ ವಲಸೆ ಬಂದಿರುವ ಮುಸ್ಲಿಮರನ್ನು ಗುರುತಿಸಿ ಅವರನ್ನು ದೇಶಭ್ರಷ್ಟರನ್ನಾಗಿ ಮಾಡುವುದು ಈ ಕಾನೂನಿನ ಗುರಿಯಾಗಿದೆ. ಕಳೆದ ಅಧಿವೇಶನದಲ್ಲೇ ಈ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಆದರೆ, ಧಾರ್ಮಿಕವಾಗಿ ಇದು ತಾರತಮ್ಯವಾಗಿದೆ. ಮುಸ್ಲಿಮರನ್ನೇ ಗುರಿಯಾಗಿಸಿಕೊಳ್ಳಲಾಗಿದೆ ಎಂದು ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಚರ್ಚೆಯಲ್ಲೇ ಕಾಲವ್ಯಯವಾಗಿ ಮಸೂದೆಗೆ ಅನುಮೋದನೆ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಈ ಪೌರತ್ವ ಮಸೂದೆಗೆ ಅಂಗೀಕಾರ ದೊರಕಿದ್ದು, ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago