ಬೆಂಗಳೂರು : ಧರ್ಮದ ಉಳಿವಿಗಾಗಿ ರಾಜ್ಯದ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆಯ ಕುರಿತಾಗಿ ಟ್ವೀಟ್ ಮಾಡಿದ್ದಾರೆ.
ಧರ್ಮದ ಉಳಿವಿಗಾಗಿ ಹಿಂದೂಗಳು ರಾಜ್ಯ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ. ನಾವು ರಾಜ್ಯವನ್ನು ನಿಯಂತ್ರಿಸದಿದ್ದಾಗ, ನಮ್ಮ ದೇವಾಲಯವನ್ನು ಕಳೆದುಕೊಂಡಿದ್ದೇವೆ. ನಾವು ಮರಳಿ ಪಡೆದಾಗ, ನಾವು ಪುನರ್ನಿರ್ಮಿಸಿದ್ದೇವೆ ಎಂದು ಹೇಳಿರುವ ಅವರು, ರಾಮ ಮಂದಿರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಧ್ಯವಾಗಿದೆ ಎಂದಿದ್ದಾರೆ.
ಸೂರ್ಯ ತನ್ನ ಇನ್ನೊಂದು ಟ್ವೀಟ್ನಲ್ಲಿ, ಭಾರತೀಯ ತತ್ವಜ್ಞಾನಿ ಅರವಿಂದ ಘೋಷ್ ಬಗ್ಗೆ ಉಲ್ಲೇಖಿಸಿದ್ದು ಸನಾತನ ಧರ್ಮವೆಂದರೆ ಅದು ರಾಷ್ಟ್ರೀಯತೆ ಎಂದು ಅರವಿಂದ ಘೋಷ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ ಇದರ ಅರ್ಥವೇನು? ಪುರೋಹಿತರು ಜೈ ಶ್ರೀ ರಾಮ್ ಜೊತೆಗೆ ಭಾರತ್ ಮಾತಾ ಕಿ ಜೈ ಎಂದು ಜಪಿಸಿದರು. ಅದು ಧರ್ಮ ರಾಷ್ಟ್ರೀಯತೆ. ಧರ್ಮ ಉಳಿದುಕೊಂಡರೆ ಭಾರತ ಬದುಕುಳಿಯುತ್ತದೆ ಎಂದು ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…