ಉಡುಪಿ: ಪೇಜಾವರ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ಮೊದಲು ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಮುಚ್ಚಕೊಳ್ಳಲಿ. ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದು ನಿಲ್ಲಿಸಲಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಕಿಡಿಕಾರಿದ್ದರು.
ಈ ಹೇಳಿಕೆಗೆ ಟ್ವೀಟರ್ ಮೂಲಕ ತಿರುಗೇಟು ನೀಡಿರುವ ರಘುಪತಿ ಭಟ್, ಮಾಜಿ ಸಚಿವರಾದ ಎಂಬಿ ಪಾಟೀಲರೇ, ಧರ್ಮದ ವಿಚಾರವಾಗಿ ಪೇಜಾವರ ಶ್ರೀಗಳನ್ನು ನಿಂದಿಸುವ ಯಾವ ಯೋಗ್ಯತೆಯನ್ನೂ ನೀವು ಉಳಿಸಿಕೊಂಡಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮವನ್ನು ಒಡೆಯಲು ಮುಂದಾದವರು ನೀವು. ನೀವು ಎಷ್ಟು ಬೊಬ್ಬಿರಿದರೂ ಧರ್ಮ ಒಡೆದ ಪಾಪ ನಿಮ್ಮನ್ನು ಎಂದಿಗೂ ಬಿಡೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀರಶೈವರು ಹಾಗೂ ಲಿಂಗಾಯಿತರು ಹಿಂದೂಗಳೇ ಆಗಿದ್ದಾರೆ. ಇಬ್ಬರೂ ಬೇರೆಯಲ್ಲ. ಅನೇಕ ಸಂಪ್ರದಾಯಗಳ ಸಮ್ಮಿಲನವೇ ಒಂದು ಹಿಂದೂ ಧರ್ಮ ಎಂದು ಹೇಳಿದ್ದ ಪೇಜಾವರ ಶ್ರೀಗಳು, ಈ ವಿಚಾರವಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್ ಎಂ ಜಾಮದಾರ, ಸಾಣೀಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ, ಮಾಜಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಪ್ರತ್ಯೇಕ ಲಿಂಗಾಯತ ಧರ್ಮ ಸಮರ್ಥಕರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…