ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮಜ್ಜನ ಕಾರ್ಯ ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಯಿತು.
ಭಾನುವಾರ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ರಾಜ್ಯದೆಲ್ಲೆಡೆಯಿಂದ ಬಂದ 500ಕ್ಕೂ ಮಿಕ್ಕಿ ಕಾರ್ಯಕರ್ತರು ನದಿಯ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ನೇತ್ರಾವತಿಗೇ ಮಜ್ಜನ ಯಾಕೆ ?
ಸ್ನಾನ ಮಾಡುವ ನೆಪದಲ್ಲಿ, ವಿಭಿನ್ನ ಆಚರಣೆಗಳ ಹಿನ್ನೆಲೆಯಲ್ಲಿ ಮೂಢ ನಂಬಿಕೆಯಿಂದ ನಾವೆಲ್ಲ ನೇತ್ರಾವತಿ ನದಿಯನ್ನು ಕಲುಷಿತಗೊಳಿಸಿದ್ದೇವೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಅನುಮತಿಯೊಂದಿಗೆ ನಾವು ಇಂದು ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ ಮಾಡಿದ್ದೇವೆ. ದಯ ಮಾಡಿ ನದಿಯನ್ನು ಎಂದಿಗೂ ಕಲುಷಿತಗೊಳಿಸಬೇಡಿ, ಇನ್ನೆಂದಿಗೂ ಕೊಳಕು ಮಾಡಬೇಡಿ ಎಂದು ಯುವ ಬ್ರಿಗೇಡ್ ಕಾರ್ಯಕರ್ತರು ಭಕ್ತರಿಗೆ ಫಲಕವನ್ನು ಹಾಕಿ ಯಾತ್ರಾರ್ಥಿಗಳಿಗೆ ಕರೆ ನೀಡಿದರು. ಯಾತ್ರಾರ್ಥಿಗಳಿಗೂ ಸ್ವಚ್ಛತೆಯ ಅರಿವು ಮೂಡಿಸಿದರು.
ಡಾ.ಹೆಗ್ಗಡೆ ಕುಟುಂಬ ಪ್ರೋತ್ಸಾಹ
ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮದಲ್ಲಿಗೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬದವರು ಭೇಟಿ ನೀಡಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು. ಹೇಮಾವತಿ ವೀ. ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸುಪ್ರಿಯ ಹರ್ಷೇಂದ್ರ ಕುಮಾರ್ ಜತೆಗಿದ್ದರು. ಶ್ರೀ ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ಕಾರ್ಯಕರ್ತರಿಗೆಲ್ಲ ಊಟ, ವಸತಿ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಯಿತು.
ಸರಕಾರವೇ ಕಡ್ಡಾಯ ಆದೇಶ ನೀಡಬೇಕು : ಡಾ.ವೀರೇಂದ್ರ ಹೆಗ್ಗಡೆ
ಸ್ನಾನ ಮಾಡಿ ನದಿ ನೀರಿನಲ್ಲೆ ಬಟ್ಟೆ ಒಗೆಯುವುದರಿಂದ, ತ್ಯಾಜ್ಯಗಳನ್ನು ಹಾಕುವುದರಿಂದ ಪಾವಿತ್ರ್ಯಕ್ಕೆ ಧಕ್ಕೆಯಾಗುವುದಲ್ಲದೆ ಅನಾರೋಗ್ಯಕರ ಪರಿಸರ ನಿರ್ಮಾಣವಾಗುತ್ತದೆ. ತೀರ್ಥಕ್ಷೇತ್ರದಲ್ಲಿರುವ ನದಿಗಳಲ್ಲಿ ಬಟ್ಟೆ ಒಗೆಯದಂತೆ ಸರಕಾರವೇ ಕಡ್ಡಾಯ ಕಾನೂನು ಜಾರಿ ಮಾಡಿದರೆ ಮಾತ್ರ ಯಶಸ್ವಿಯಾಗುತ್ತದೆ. ಸರಕಾರ ಇದಕ್ಕೆ ಸಹಕರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ನದಿಯ ಪಾವಿತ್ರ್ಯತೆಗೆ ಧಕ್ಕೆ ಬಂದಿದೆ. ಜನರಿಗೆ ಸ್ವಯಂ ಎಚ್ಚರಿಕೆ, ಜ್ಞಾನ, ಹೊಣೆಗಾರಿಕೆ ಬಾರದೆ ಇದ್ದರೆ ಸಾಧ್ಯವೇ ಇಲ್ಲ. ಕ್ಷೇತ್ರದ ವತಿಯಿಂದ ಬಹಳಷ್ಟು ಪ್ರಯತ್ನ ಮಾಡುತ್ತೇವೆ. ನದಿಯಲ್ಲಿ ಸ್ನಾನ ಮಾಡುವಾಗ ಸೋಪು ಬಳಸುವುದು, ಬಟ್ಟೆ ಎಸೆಯುವುದು ಸರಿಯಲ್ಲ. ಇದನ್ನೊಂದು ರಾಷ್ಟ್ರೀಯ ಜಾಗೃತಿ, ರಾಜ್ಯ ಜಾಗೃತಿಯಾಗಿ ತೆಗೆದುಕೊಳ್ಳಬೇಕು. ಇದು ಇಲ್ಲಿ ಮಾತ್ರವಲ್ಲ ನಾಡಿನ ಎಲ್ಲಾ ತೀರ್ಥ ಕ್ಷೇತ್ರಗಳಲ್ಲೂ ಇದೇ ಸಮಸ್ಯೆಯಾಗಿದೆ. ಇದು ರಾಜ್ಯವ್ಯಾಪ್ತಿ ಆಂದೋಲನ ಆಗಬೇಕು. ಜನರು ಎಚ್ಚರಿಕೆಯಾಗಿ, ಜಾಗೃತಿಯಾಗಿ ಬಂದರೆ ಸ್ವಚ್ಛತೆ ಇರುತ್ತದೆ ಎಂದರು.
ಯುವ ಬ್ರಿಗೇಡ್ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದ ಡಾ.ಹೆಗ್ಗಡೆಯವರು, ಭಕ್ತರು ಕೂಡಾ ಮೂಢನಂಬಿಕೆಗೆ ಒಳಗಾಗದೆ ಎಚ್ಚರಿಕೆ ಮತ್ತು ಹೊಣೆಗಾರಿಕೆಯಿಂದ ನದಿಯ ಪಾವಿತ್ರ್ಯ ಕಾಪಾಡಬೇಕು. ಇದು ರಾಷ್ಟ್ರ ವ್ಯಾಪಿ ಆಂದೋಲನವಾಗಬೇಕು ಎಂದು ಸಲಹೆ ನೀಡಿದರು. ಎನ್ಸಿಸಿ ಹಾಗೂ ಎನ್ಎಸ್ಎಸ್ ಸ್ವಯಂ ಸೇವಕರು ಕೂಡಾ ಸ್ವಚ್ಛತೆ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.
ನದಿ ಮೂಲವನ್ನು ಉಳಿಸಿಕೊಳ್ಳಬೇಕು : ಸೂಲಿಬೆಲೆ
ಯುವ ಬ್ರಿಗೇಡ್ನ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಯುವ ಬ್ರಿಗೇಡ್ ನೀರಿನ ಮೂಲದ ಕುರಿತಂತೆ, ನೀರಿನ ಕುರಿತಂತೆ ತುಂಬಾ ಕಾಳಜಿ ಇಟ್ಟುಕೊಂಡ ಸಂಘ ಟನೆ. ಈ ಹಿಂದೆ 120ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿದ್ದೇವೆ. ಕಟೀಲಿನ ನಂದಿನಿ, ಕೊಲ್ಲೂರಿನ ಸೌಪರ್ಣಿಕಾ, ನಂಜನಗೂಡಿನ ಕಪಿಲಾ ಹಾಗೂ ಕಾವೇರಿ ನದಿಯನ್ನು ಸ್ವಚ್ಛ ಮಾಡಿದ ನಂತರ ನೇತ್ರಾವತಿ ನದಿಯನ್ನು ಸ್ವಚ್ಛ ಮಾಡಬೇಕು ಅನ್ನಿಸಿತು. ಶ್ರೀ ಕ್ಷೇತ್ರದ ವತಿಯಿಂದ ನದಿಯನ್ನು, ಸ್ನಾನಘಟ್ಟವನ್ನು ತುಂಬಾ ಚೆನ್ನಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ನದಿಯ ಒಳಗಡೆ ಯಾತ್ರಾರ್ಥಿಗಳು ಬಟ್ಟೆಬರೆಗಳನ್ನು, ದೇವರ ಫೋಟೋಗಳನ್ನು ಹಾಕಿ ಕೊಳಕು ಮಾಡಿದ್ದಾರೆ. ಅದನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಹಿಂದೆಯೂ ಮಾಡಿದ್ದೀವಿ, ಮುಂದೆಯೂ ಮಾಡುತ್ತೇವೆ ಎಂದರು.
ನಾಡಿನ ನದಿ ಮೂಲಗಳನ್ನು ಉಳಿಸಿಕೊಳ್ಳಬೇಕು. ಎಲ್ಲರಿಗೂ ಕುಡಿಯಲು ನೀರು ಬೇಕು, ನದಿ ನೀರನ್ನು ನಾವು ಬೇರೆ ಕಡೆ ತೆಗೆದುಕೊಂಡು ಹೋಗ್ತೀವಿ ಎಂದು ಹೇಳಬೇಕಾದರೆ ಇರುವ ನೀರನ್ನ ಶುದ್ಧವಾಗಿ ಇರಿಸಿಕೊಳ್ಳಬೇಕು. ಈ ಪ್ರಯತ್ನಕ್ಕೆ ಯುವ ಬ್ರಿಗೇಡ್ ಯಾವತ್ತು ಬದ್ಧವಾಗಿದೆ. ಇವತ್ತು ರಾಜ್ಯದ ಬೇರೆ ಬೇರೆ ಭಾಗಗಳಿಂದ 350 ಕಾರ್ಯಕರ್ತರು ಬಂದಿದ್ದಾರೆ. ಸ್ಥಳೀಯವಾಗಿ ಬೇರೆ ಬೇರೆ ಸಂಘಟನೆಗಳೂ ಕೈಜೋಡಿಸಿವೆ. ಮಳೆಗಾಲದಲ್ಲಿ ನದಿ ಸ್ವಚ್ಛತೆ ಮಾಡಲು ಆಗುವುದಿಲ್ಲ. ಆಗ ಜಲಾನಯನದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ರಾಜ್ಯದ ಅನೇಕ ಕಡೆಗಳಲ್ಲಿ ನದಿಗಳು ಹಾಗೂ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಲಾಗಿದೆ. ಇದರಿಂದಾಗಿ ಗದಗದಲ್ಲಿ ಬತ್ತಿ ಹೋದ ಕೆರೆಯಲ್ಲಿ ಈಗ ನೀರಿನ ಮಟ್ಟ ಏರಿಕೆಯಾಗಿದೆ ಎಂದು ಹೇಳಿದರು. ರಾಜ್ಯದೆಲ್ಲೆಡೆ ಯುವಾ ಬ್ರಿಗೇಡ್ನ ಮೂರು ಸಾವಿರ ಕಾರ್ಯಕರ್ತರು ನದಿಗಳ ಸ್ವಚ್ಛತಾ ಅಭಿಯಾನದಲ್ಲಿ ನಿರತರಾಗಿದ್ದಾರೆ ಎಂದು ಯುವ ಬ್ರಿಗೇಡ್ ರಾಜ್ಯ ಸಂಚಾಲಕ ಚಂದ್ರಶೇಖರ್ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…