Featured

ಧರ್ಮಸ್ಥಳದಲ್ಲಿ ನ.26 ರಿಂದ ಡಿ.1 ರವರೆಗೆ ಅದ್ದೂರಿ ಲಕ್ಷದೀಪೋತ್ಸವ – vishwanews24

ಧರ್ಮಸ್ಥಳದಲ್ಲಿ ನ.26 ರಿಂದ ಡಿ.1 ರವರೆಗೆ ಅದ್ದೂರಿ ಲಕ್ಷದೀಪೋತ್ಸವ

ಧರ್ಮಸ್ಥಳ: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ಜರುಗುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಈ ವರ್ಷ ನ.26 ರಿಂದ ಡಿ.1 ರವರೆಗೆ ಅದ್ದೂರಿಯಾಗಿ ನಡೆಯಲಿದೆ. ನ.26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರುಕಟ್ಟೆ ಉತ್ಸವ, 30ರಂದು ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ), ಡಿ.1ರಂದು ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನಡೆಯಲಿದೆ.

ನ.26ರಂದು ಮಧ್ಯಾಹ್ನ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ 25,000ಕ್ಕೂ ಹೆಚ್ಚು ಭಕ್ತರು ಮತ್ತು ಅಭಿಮಾನಿಗಳು ಪಾದಯಾತ್ರೆಯಲ್ಲಿ ಪ್ರಾರ್ಥನೆ, ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಆಗಮಿಸಲಿದ್ದಾರೆ.

ಈ ಪಾದಯಾತ್ರೆಯು ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಅವರ ನೇತೃತ್ವದಲ್ಲಿ ನಡೆಯಲಿದೆ.

ರಾಜ್ಯಮಟ್ಟದ ವಸ್ತು ಪ್ರದರ್ಶನ:
ನ.26 ರಿಂದ 30ರವರೆಗೆ ಧರ್ಮಸ್ಥಳ ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಸ್ತು ಪ್ರದರ್ಶನದಲ್ಲಿ ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಮತ್ತು ಗ್ರಾಮೀಣ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುವುದು.

ಅಮೃತವರ್ಷಿಣಿ ಸಭಾಭವನದಲ್ಲಿ ನ.29 ರಂದು ಸಂಜೆ 4 ಗಂಟೆಗೆ ಸರ್ವಧರ್ಮ ಸಮ್ಮೇಳನ ಹಾಗೂ ನ.30 ರಂದು ಸಂಜೆ 4 ಗಂಟೆಗೆ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪ್ರತಿದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago