Featured

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನ ಅಪವಿತ್ರಗೊಳಿಸುವ ಪ್ರಯತ್ನ : ಕೆ.ಎಸ್ ಈಶ್ವರಪ್ಪ – vishwanews24

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ..

ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ,  ಮುಂದೆಯೂ ಅನುಭವಿಸುತ್ತಾರೆ  : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ. ಮುಂದೆಯೂ ಅನುಭವಿಸುತ್ತಾರೆ. ಗೋಶಾಲೆಗೆ ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ಸ್ಥಾಪಿಸಬೇಕು ಎಂದು ನಿರ್ಧರಿಸಿತ್ತು. ಮದರಸಾ, ಉರ್ದು ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚುತ್ತೀರಾ? ಎಂದು ಪ್ರಶ್ನಿಸಿದರು.

ಮತ್ತೊಂದೆಡೆ ಮೃತ್ಯುಂಜಯ ನದಿಗೆ ಗೋ ಮಾಂಸದ ತ್ಯಾಜ್ಯ ಹಾಕಲಾಗಿದೆ. ಈ ನೀರು ನೇತ್ರಾವತಿ ನದಿಗೆ ಸೇರುತ್ತದೆ. ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನವನ್ನು ಅಪವಿತ್ರಗೊಳಿಸುವ ಪ್ರಯತ್ನ ಇದು. ಗೋ ಹತ್ಯೆ ನಿಷೇಧವಿದ್ದರೂ ಇಷ್ಟೊಂದು ಗೋ ಮಾಂಸ ತ್ಯಾಜ್ಯ ಬಂದಿದ್ದು ಹೇಗೆ? ಹಿಂದೂ ಸಮಾಜಕ್ಕೆ ಮತ್ತು ನಂಬಿಕೆಗೆ ತೊಂದರೆ ಉಂಟು ಮಾಡುವವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

16 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

17 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

20 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago