Featured

ಧರ್ಮಸ್ಥಳದಲ್ಲಿ  ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು : ಶಾಸಕ ಸುನಿಲ್ ಕುಮಾರ್ ಆಕ್ರೋಶ – vishwanews24

ಧರ್ಮಸ್ಥಳದಲ್ಲಿ  ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು : ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ : ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ ಎಂದಿದ್ದಾರೆ.

ನಿನ್ನೆ ಧರ್ಮಸ್ಥಳದಲ್ಲಿ ನಡೆದ ಗಲಾಟೆ ಬಗ್ಗೆ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್ ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ?

ಹಿಂದು ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂ ಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ?

ನಾಡಿನ ಪ್ರಮುಖ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

25 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

35 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

54 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago