ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ ಸದನದಲ್ಲಿ ಉತ್ತರ ಕೊಡುವ ವಿಚಾರವಾಗಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇವತ್ತು ಸದನದಲ್ಲಿ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ. ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ. ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ ಎಂದು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳನ್ನು ಮಾಡ್ತಿದ್ದಾರೆ. ಅವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಬೇಕು. ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ನವರು ಕಾರಣ ಇಲ್ಲದೇ ಸುಮೋಟೋ ಕೇಸ್ ಹಾಕ್ತಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು. ಪ್ರಕರಣದಲ್ಲಿ ಷಡ್ಯಂತ್ರ ಏನಾಗಿದೆ ಎಂದು ಹೇಳಬೇಕು. ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು ಎಂದು ಆಗ್ರಹಿಸಿದ್ದಾರೆ.
ಅನಾಮಿಕ ವ್ಯಕ್ತಿಯು ಸುಪ್ರೀಂ ಕೋರ್ಟ್ಗೆ ಲಾಯರ್ಗಳನ್ನ ಇಟ್ಟುಕೊಂಡಿದ್ದು, ಇಷ್ಟ ಬಂದ ಹಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಅನಾಮಿಕ ವ್ಯಕ್ತಿಯ ಮೂಲಕ ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ. ಇದನ್ನ ಪಿಎಫ್ಐ, ಎಸ್ಡಿಪಿಐ ಮಾಡ್ತಿದೆ. ಅನಾಮಿಕ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಯ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…