ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನಿಲ್ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ಆ ಬಳಿಕ ದೇವರ ದರ್ಶನ ಮುಗಿಸಿ ಮಧ್ಯಾಹ್ನದ ಅನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ತನ್ನ ಮೊಬೈಲ್ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತತ್ಕ್ಷಣ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್ನನ್ನು ಪತ್ತೆ ಮಾಡಿದ್ದರು. ಉಜಿರೆ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ.
ಸುನಿಲ್ ಊರಿನಲ್ಲಿ ಪಾದರಕ್ಷೆಯ ಮಳಿಗೆಯನ್ನು ಹೊಂದಿದ್ದು, ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದೆ. ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿ ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಬಿಜೆಪಿಗೆ ಯಾರು ಸೂಕ್ತ ಅಭ್ಯರ್ಥಿ….?? ಓದಿ ಮೊರಲ್ ಸರ್ವೆ ವರದಿ vishwanews24 –
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…