Featured

ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ – vishwanews24

ಧರ್ಮಸ್ಥಳ ಕೇಸ್ : ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.

ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.

ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎಂದು ವರದಿಯಾಗಿದೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago