Featured

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ – Vishwanews24

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್‌ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದಕ್ಕೆ ಸರ್ಕಾರ ಸಹಕರಿಸಬೇಕು. ರಾಜ್ಯಸಭೆ ಅಧಿವೇಶನದ ಮೊದಲ ಭಾಷಣದಲ್ಲೂ ಈ ಬಗ್ಗೆ ಮಾತನಾಡುವುದಾಗಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದ ವ್ಯಾಪ್ತಿಯನ್ನು ಇನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಇಲ್ಲಿಗೆ ಬರುವ ಜನರಿಗೆ ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ ಅಂತಾ ಗೊತ್ತಿದೆ. ಅವರನ್ನು ವಾಹನದ ಡ್ರೈವರ್‌ ಉಜಿರೆಗೆ ಬಂದಾಗಲೇ ಎಚ್ಚರಿಸುತ್ತಾನೆ. ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ. ತೆಗೆದುಕೊಳ್ಳುವುದಾದರೆ ಇಲ್ಲೇ ತೆಗೆದುಕೊಳ್ಳಿ ಅಂತಾ ಎಚ್ಚರಿಸುತ್ತಾನೆ ಎಂದು ಹೆಗ್ಗಡೆ ಹೇಳಿದರು.

ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು : ಧರ್ಮಸ್ಥಳದ ಸುತ್ತ ಮೂರು ನದಿಗಳು ಬರುತ್ತವೆ. ‌ಈ ನದಿಗಳ ವ್ಯಾಪ್ತಿಯಲ್ಲಿ ಖಾಸಗಿ ಹೋಟೆಲ್, ವಸತಿ, ಬಾರ್‌ಗಳನ್ನು ತಲೆ ಎತ್ತದಂತೆ ಸರ್ಕಾರ ನೋಡಿಕೊಳ್ಳಬೇಕು. ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೌಲಭ್ಯ ಆಗಬೇಕು. ಆದರೆ ಮೋಜು ಮಸ್ತಿಗೆ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಅವಕಾಶ ನೀಡಬಾರದು. ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago