Featured

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ – Vishwanews24

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್‌ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದಕ್ಕೆ ಸರ್ಕಾರ ಸಹಕರಿಸಬೇಕು. ರಾಜ್ಯಸಭೆ ಅಧಿವೇಶನದ ಮೊದಲ ಭಾಷಣದಲ್ಲೂ ಈ ಬಗ್ಗೆ ಮಾತನಾಡುವುದಾಗಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದ ವ್ಯಾಪ್ತಿಯನ್ನು ಇನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಇಲ್ಲಿಗೆ ಬರುವ ಜನರಿಗೆ ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ ಅಂತಾ ಗೊತ್ತಿದೆ. ಅವರನ್ನು ವಾಹನದ ಡ್ರೈವರ್‌ ಉಜಿರೆಗೆ ಬಂದಾಗಲೇ ಎಚ್ಚರಿಸುತ್ತಾನೆ. ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ. ತೆಗೆದುಕೊಳ್ಳುವುದಾದರೆ ಇಲ್ಲೇ ತೆಗೆದುಕೊಳ್ಳಿ ಅಂತಾ ಎಚ್ಚರಿಸುತ್ತಾನೆ ಎಂದು ಹೆಗ್ಗಡೆ ಹೇಳಿದರು.

ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು : ಧರ್ಮಸ್ಥಳದ ಸುತ್ತ ಮೂರು ನದಿಗಳು ಬರುತ್ತವೆ. ‌ಈ ನದಿಗಳ ವ್ಯಾಪ್ತಿಯಲ್ಲಿ ಖಾಸಗಿ ಹೋಟೆಲ್, ವಸತಿ, ಬಾರ್‌ಗಳನ್ನು ತಲೆ ಎತ್ತದಂತೆ ಸರ್ಕಾರ ನೋಡಿಕೊಳ್ಳಬೇಕು. ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೌಲಭ್ಯ ಆಗಬೇಕು. ಆದರೆ ಮೋಜು ಮಸ್ತಿಗೆ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಅವಕಾಶ ನೀಡಬಾರದು. ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago