Featured

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ – Vishwanews24

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್‌ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದಕ್ಕೆ ಸರ್ಕಾರ ಸಹಕರಿಸಬೇಕು. ರಾಜ್ಯಸಭೆ ಅಧಿವೇಶನದ ಮೊದಲ ಭಾಷಣದಲ್ಲೂ ಈ ಬಗ್ಗೆ ಮಾತನಾಡುವುದಾಗಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದ ವ್ಯಾಪ್ತಿಯನ್ನು ಇನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಇಲ್ಲಿಗೆ ಬರುವ ಜನರಿಗೆ ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ ಅಂತಾ ಗೊತ್ತಿದೆ. ಅವರನ್ನು ವಾಹನದ ಡ್ರೈವರ್‌ ಉಜಿರೆಗೆ ಬಂದಾಗಲೇ ಎಚ್ಚರಿಸುತ್ತಾನೆ. ಧರ್ಮಸ್ಥಳದಲ್ಲಿ ಮದ್ಯ ಸಿಗುವುದಿಲ್ಲ. ತೆಗೆದುಕೊಳ್ಳುವುದಾದರೆ ಇಲ್ಲೇ ತೆಗೆದುಕೊಳ್ಳಿ ಅಂತಾ ಎಚ್ಚರಿಸುತ್ತಾನೆ ಎಂದು ಹೆಗ್ಗಡೆ ಹೇಳಿದರು.

ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು : ಧರ್ಮಸ್ಥಳದ ಸುತ್ತ ಮೂರು ನದಿಗಳು ಬರುತ್ತವೆ. ‌ಈ ನದಿಗಳ ವ್ಯಾಪ್ತಿಯಲ್ಲಿ ಖಾಸಗಿ ಹೋಟೆಲ್, ವಸತಿ, ಬಾರ್‌ಗಳನ್ನು ತಲೆ ಎತ್ತದಂತೆ ಸರ್ಕಾರ ನೋಡಿಕೊಳ್ಳಬೇಕು. ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೌಲಭ್ಯ ಆಗಬೇಕು. ಆದರೆ ಮೋಜು ಮಸ್ತಿಗೆ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಅವಕಾಶ ನೀಡಬಾರದು. ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡರು.

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago