Featured

ಧರ್ಮಸ್ಥಳ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌ – vishwanews24

ಧರ್ಮಸ್ಥಳ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್‌ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮಾಡಿದ್ದೇವೆ ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ ನೀವೆಲ್ಲ ವರದಿ ಮಾಡಿದ್ದೀರಿ. ಇದರ ಹೊರತುಪಡಿಸಿ ಗುಡ್ಡದಲ್ಲಿ ಒಂದಷ್ಟು ಮೂಳೆಗಳು ಸಿಕ್ಕಿದ್ದು, ಎಫ್‌ಎಸ್‌ಎಲ್ ಗೆ ಕಳಿಸುವ ಕೆಲಸ ಎಸ್‌ಐಟಿ ಮಾಡಿದೆ ಎಂದರು..

ಇದರ ಹಿನ್ನೆಲೆಯಲ್ಲಿ ಅಥವಾ ಸಂಬಂಧಪಟ್ಟಂತೆ ಎರಡು ಗುಂಪುಗಳ ಮಧ್ಯೆ ನಿನ್ನೆ ದಿನ ಘರ್ಷಣೆಯಾಗಿದೆ. ದೂರು, ಪ್ರತಿದೂರು ಕೊಟ್ಟಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಅದನ್ನ ತನಿಖೆ ಮಾಡುತ್ತಾರೆ. ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಎಸ್‌ಐಟಿ ಹಾಗೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.

ಧರ್ಮಸ್ಥಳದ ವಿಚಾರದಲ್ಲಿ ಯಾರೋ ಹೇಳಿಕೆ ಕೊಡುತ್ತಾರೆ ಅದು ನಮಗೆ ಮುಖ್ಯವಲ್ಲ. ಎಸ್‌ಐಟಿಯವರು ತನಿಖೆಯನ್ನು ತಾಂತ್ರಿಕವಾಗಿ ಮತ್ತು ಆಧುನಿಕವಾಗಿ ಸತ್ಯ ಹೊರಗೆ ಬರುವ ರೀತಿಯಲ್ಲಿ ಮಾಡಬೇಕು. ಆ ಕೆಲಸವನ್ನು ಎಸ್‌ಐಟಿ ಮಾಡುತ್ತದೆ. ಅವರನ್ನು ಈಗಲೇ ಪ್ರಶ್ನೆ ಮಾಡಿದರೆ ತನಿಖೆಗೆ ಅರ್ಥ ಬರುವುದಿಲ್ಲ ಎಂದರು.

ಎಸ್‌ಐಟಿ ಸರಿಯಾಗಿ ತನಿಖೆ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸೆರಿಯಾಗಿ ತನಿಖೆ ಆಗುತ್ತಿಲ್ಲ ಎಂದು ಇನ್ನೂ ಕೆಲವರು ಹೇಳುತ್ತಿದ್ದಾರೆ. ಇವರೆ ಎಲ್ಲ ಸಲಹೆ ಕೊಡುತ್ತಾರೆ. ರೆಡಾರ್ ತರಬೇಕು ಎನ್ನುತ್ತಿದ್ದಾರೆ. ಅವರು ಹೇಳಿದ ರೀತಿ ತನಿಖೆ ಮಾಡಲು ಆಗುತ್ತದೆಯೇ? ಪೊಲೀಸರು ಸಮರ್ಥರಿದ್ದಾರೆ. ತನಿಖೆ ಮಾಡುತ್ತಾರೆ. ಎಸ್‌ಐಟಿ ತನಿಖೆಯ ಬಗ್ಗೆ ಸರಕಾರ ಯಾವುದೇ ಡೈರೆಕ್ಷನ್ಸ್ ಕೊಡುವುದಿಲ್ಲ ಎಂದು ಹೇಳಿದರು.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago