Featured

ಧರ್ಮಸ್ಥಳ : ನಾಳೆ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 54ನೇ ವರ್ಧಂತ್ಯುತ್ಸವ – Vishwanews24

ಧರ್ಮಸ್ಥಳ : ನಾಳೆ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 54ನೇ ವರ್ಧಂತ್ಯುತ್ಸವ – Vishwanews24

ಧರ್ಮಸ್ಥಳ: ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 54ನೇ ವರ್ಧಂತಿ ಅಕ್ಟೋಬರ್ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ನಡೆಯಲಿದೆ.

ಅಕ್ಟೋಬರ್ 24ರಂದು ಬೆಳಿಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಪಟ್ಟಾಭಿಷೇಕದ ದಿನದಂದೇ ನಾಡಿನಾದ್ಯಂತ ಧಾರ್ಮಿಕ ಕ್ಷೇತ್ರಗಳ ಮುಖಂಡರು, ಜನಪ್ರತಿನಿಧಿಗಳು, ಗಣ್ಯರು, ಗ್ರಾಮಸ್ಥರು ಕ್ಷೇತ್ರಕ್ಕೆ ಆಗಮಿಸಿ ಡಾ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಡಾ ಡಿ ವೀರೇಂದ್ರ ಹೆಗ್ಗಡೆಯವರು 1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಆಗ ಅವರು 29 ವರ್ಷದ ಯುವಕರಾಗಿದ್ದರು.

2012ರ ಅಕ್ಟೋಬರ್‌ 24ರಂದು 50 ವರ್ಷಗಳ ಸೇವೆ ಪೂರೈಸಿದ್ದು, 2018ರ ಅಕ್ಟೋಬರ್‌ 24ರವರೆಗೆ ವೈವಿಧ್ಯಮ ಕಾರ್ಯಕ್ರಮಗಳೊಂದಿಗೆ ಸುವರ್ಣ ಮಹೋತ್ಸವ ಆಚರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್‌ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ, ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ, ಸಿರಿ ಗ್ರಾಮೋದ್ಯೋಗ, ನೈರ್ಮಲ್ಯ ಯೋಜನೆಗಳು ಸೇರಿದಂತೆ ಹತ್ತುಹಲವು ಜನಪರ ಕಾರ್ಯಕ್ರಮಗಳ ನಿರ್ಮಾತೃರಾಗಿದ್ದಾರೆ ಹೆಗ್ಗಡೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

2 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

2 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

3 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

3 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

3 hours ago