ಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು – vishwanews24
ಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು: ಧರ್ಮಸ್ಥಳ ಸಮೀಪದ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಹಾಗೂ ಬೆನಕ ಆಸ್ಪತ್ರೆ ಆವರಣ ಎರಡು ಪ್ರತ್ಯೇಕ ಸ್ಥಳದಲ್ಲಿ ಬುಧವಾರ ಹಲ್ಲೆ, ಘರ್ಷಣೆ ನಡೆದಿದ್ದು, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 4 ಎಫ್ಐಆರ್ ದಾಖಲಾಗಿದೆ.
ಖಾಸಗಿ ಮಾಧ್ಯಮದ ವರದಿಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲುಗಾರ ಹಾಗೂ ಕ್ಯಾಮರಾಮೆನ್ ಮೇಲೆ ನಡೆಸಿದ ಹಲ್ಲೆ ಸಂಬಂಧ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಹಾಗೂ ಜಯಂತಿ ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ 2, ಬೆಳ್ತಂಗಡಿ ಠಾಣೆಯಲ್ಲಿ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
