ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.
ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…