ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್ಐಟಿಯ ವರದಿಯನ್ನು ಸರ್ಕಾರ ತಕ್ಷಣ ಬಹಿರಂಗ ಮಾಡಬೇಕು ಎಂದು ಶಾಸಕ ವಿ.ಸುನಿಲ್ ಕುಮಾರ್ ಅವರು ಆಗ್ರಹಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಟಿ ರಚನೆ ಆಗಿ ಇಷ್ಟು ತಿಂಗಳು ಕಳೆದರೂ ವರದಿಯನ್ನು ಬಹಿರಂಗ ಮಾಡಿಲ್ಲ. ಈ ಪ್ರಕರಣದ ಹಿಂದೆ ಯಾರ ಕೈವಾಡ ಇದೆ ಎಂದು ಸರ್ಕಾರ ತಿಳಿಸಲಿ ಎಂದು ಒತ್ತಾಯಿಸಿದರು.
ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ವಿನಾಕಾರಣ ಅವಹೇಳ ಮಾಡಲಾಗುತ್ತಿದೆ. ದೊಡ್ಡ ಷಡ್ಯಂತ್ರ ರೂಪಿಸಿದ್ದ ಗ್ಯಾಂಗಿನ ಆರೋಪಿ ಕೋರ್ಟ್ಗೆ ನೀಡಿರುವ ಹೇಳಿಕೆ ಆಘಾತಕಾರಿಯಾಗಿದೆ. ಪ್ರಕರಣದ ಬಗ್ಗೆ ವಿಧಾನಸಭೆ ಹಾಗೂ ಪಕ್ಷದ ವತಿಯಿಂದ ಬೇರೆ ಬೇರೆ ಸಂದರ್ಭದಲ್ಲಿ ಉಲ್ಲೇಖ ಮಾಡಿದ್ದೆವು. ಇದರ ಹಿಂದೆ ಕೇರಳದ ನಂಟಿದೆ, ಬೇರೆ ಬೇರೆ ರಾಜ್ಯದ ನಂಟಿದೆ ಎಂದು ಹೇಳಿದ್ದೆವು ಎಂದು ಹೇಳಿದರು.
ಆರೋಪಿ ಎಸ್ಐಟಿ ಮುಂದೆ ಹೇಳಲಾಗದ್ದನ್ನು ನ್ಯಾಯಾಲಯದ ಮುಂದೆ ಹೇಳಿದ್ದಾನೆಂದರೆ ಎಸ್ಐಟಿ ಯಾವ ರೀತಿಯ ತನಿಖೆ ಮಾಡಿತ್ತು. ಇದರ ಹಿಂದಿರುವ ಹುನ್ನಾರ ಏನು? ಎಲ್ಲವೂ ಸಾರ್ವಜನಿಕ ಚರ್ಚೆಗೆ ಬರಬೇಕಾಗಿದೆ ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…