Featured

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಬಂಧನ ನಿಜ; ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ.: ಡಾ. ಜಿ. ಪರಮೇಶ್ವರ್ – vishwanews24

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಬಂಧನ ನಿಜ; ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ.: ಡಾ. ಜಿ. ಪರಮೇಶ್ವರ್

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರನ ಬಂಧನವಾಗಿರುವುದು ನಿಜ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ..

ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಿರಿಯರ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಅವರು ಸುದ್ದಿ ಗಾರರೊಂದಿಗೆ ಮಾತನಾಡುತಿದ್ದರು.

ಸದ್ಯ ದೂರುದಾರ ಪೊಲೀಸ್‌ ಕಸ್ಟಡಿಯಲ್ಲಿದ್ದು, ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಎಸ್‌ಐಟಿ ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿಯಿಂದ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.

ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು.ಎಸ್‌ಐಟಿ ತನಿಖೆ ಮುಕ್ತಾಯ ಆಗುತ್ತಾ ಎಂದು ಹೇಳಲು ಸಾಧ್ಯವಿಲ್ಲ. ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ. ಹೀಗಾಗಿ ಯಾವುದನ್ನು ಕೂಡ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅನೇಕ ಆರಂಭಗಳನ್ನು ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ ಎಂದರು.

ಅನಾಮಿಕ ದೂರುದಾರನನ್ನು ಯಾವ ಸೆಕ್ಷನ್ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು ಎಂದ ಅವರು, ಎಸ್ಐಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ. ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಖಚಿತ ಪಡಿಸಬಲ್ಲೆ ಎಂದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

17 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

18 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

18 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

18 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

19 hours ago