Featured

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಬಂಧನ ನಿಜ; ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ.: ಡಾ. ಜಿ. ಪರಮೇಶ್ವರ್ – vishwanews24

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಬಂಧನ ನಿಜ; ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ.: ಡಾ. ಜಿ. ಪರಮೇಶ್ವರ್

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರನ ಬಂಧನವಾಗಿರುವುದು ನಿಜ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ..

ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಿರಿಯರ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಅವರು ಸುದ್ದಿ ಗಾರರೊಂದಿಗೆ ಮಾತನಾಡುತಿದ್ದರು.

ಸದ್ಯ ದೂರುದಾರ ಪೊಲೀಸ್‌ ಕಸ್ಟಡಿಯಲ್ಲಿದ್ದು, ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಎಸ್‌ಐಟಿ ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿಯಿಂದ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.

ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು.ಎಸ್‌ಐಟಿ ತನಿಖೆ ಮುಕ್ತಾಯ ಆಗುತ್ತಾ ಎಂದು ಹೇಳಲು ಸಾಧ್ಯವಿಲ್ಲ. ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ. ಹೀಗಾಗಿ ಯಾವುದನ್ನು ಕೂಡ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅನೇಕ ಆರಂಭಗಳನ್ನು ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ ಎಂದರು.

ಅನಾಮಿಕ ದೂರುದಾರನನ್ನು ಯಾವ ಸೆಕ್ಷನ್ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು ಎಂದ ಅವರು, ಎಸ್ಐಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ. ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಖಚಿತ ಪಡಿಸಬಲ್ಲೆ ಎಂದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

1 hour ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

1 hour ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

2 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

2 hours ago