ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರನ ಬಂಧನವಾಗಿರುವುದು ನಿಜ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ..
ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಿರಿಯರ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಅವರು ಸುದ್ದಿ ಗಾರರೊಂದಿಗೆ ಮಾತನಾಡುತಿದ್ದರು.
ಸದ್ಯ ದೂರುದಾರ ಪೊಲೀಸ್ ಕಸ್ಟಡಿಯಲ್ಲಿದ್ದು, ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿಯಿಂದ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.
ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು.ಎಸ್ಐಟಿ ತನಿಖೆ ಮುಕ್ತಾಯ ಆಗುತ್ತಾ ಎಂದು ಹೇಳಲು ಸಾಧ್ಯವಿಲ್ಲ. ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ. ಹೀಗಾಗಿ ಯಾವುದನ್ನು ಕೂಡ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅನೇಕ ಆರಂಭಗಳನ್ನು ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ ಎಂದರು.
ಅನಾಮಿಕ ದೂರುದಾರನನ್ನು ಯಾವ ಸೆಕ್ಷನ್ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು ಎಂದ ಅವರು, ಎಸ್ಐಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ. ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಖಚಿತ ಪಡಿಸಬಲ್ಲೆ ಎಂದರು.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…