ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೆ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗುದುಕೊಳ್ಳಿ. ಎಸ್ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…